READ MORE - [娛樂] 曉明攬 Baby 麼麼茶調情



READ MORE - [新聞] 2 男踩腹 短裙女唱歌冇走音


READ MORE - [新聞] 混血狗 雪橇頭加歌基腳


READ MORE - [新聞] 陳振聰換律師 申請上訴終院


READ MORE - [新聞] 超級雨傘 防火防惡狗


READ MORE - [新聞] 網吧宵禁 細路返屋企

[娛樂] 蔡楓華哄動中大

Diposkan oleh Batas Langit | 23:40


READ MORE - [娛樂] 蔡楓華哄動中大

[新聞] 紅磡天星 告別香港

Diposkan oleh Batas Langit | 23:39


READ MORE - [新聞] 紅磡天星 告別香港


READ MORE - [新聞] 良心僱主:扣飯鐘 火都來!


READ MORE - [娛樂] 哥哥迷聚港 潘姐姐:仍然唔捨得

Prevent Your Child From Being Injured

Diposkan oleh Batas Langit | 18:17
On Thursday, March 31, 2011 at 9:37 AM, one Company of Los Angeles Firefighters and one LAFD Rescue Ambulance responded to a Injury in South Los Angeles.

Firefighters quickly arrived to an apartment complex where they found a male child that was severely injured. The child's injuries may have been caused from a falling object. Firefighters rapidly treated the child's injuries and provided Advanced Life Support while transporting him to a local hospital, sadly he was later pronounced dead. Our thoughts are with his family at this time...

Countless injuries occur each year when children climb, fall against or pull themselves onto "unsecured" furnishings, often in an attempt to access a television or other heavy appliance. Please join the LAFD in preventing these accidents from occurring by reviewing and sharing these life saving tips...

 

  • Furniture should be stable on its own. For added security, anchor large units to the floor or attach them securely to a wall.
  • Place your television on a sturdy, low base, and push the TV as far back as possible.
  • Place electrical cords out of a child’s reach, and teach kids not to play with them.
  • Keep remote controls and other attractive items off the TV stand so kids won’t be tempted to grab for them and risk knocking the TV over.
  • Make sure free-standing ranges and stoves are installed with anti-tip brackets.
  • Keep children safe by surveying the homes of caretakers and sharing this important information.





Submitted by Erik Scott, Spokesman
Los Angeles Fire Department
READ MORE - Prevent Your Child From Being Injured

ಹಮೀದ್ ಪಾಳ್ಯ ಸುವರ್ಣ ನ್ಯೂಸ್ ವಾಹಿನಿಯ ಸುದ್ದಿ ಮುಖ್ಯಸ್ಥರಾಗಿ ನೇಮಕವಾಗಿದ್ದಾರೆ. ಇದುವರೆಗೆ ಈ ಜವಾಬ್ದಾರಿ ಹೊತ್ತಿದ್ದ ಎಚ್. ಆರ್ ರಂಗನಾಥ್ ಸಂಪಾದಕೀಯ ಸಲಹೆಗಾರರಾಗಿ ಮುಂದುವರಿಯಲಿದ್ದಾರೆ ಎಂಬ ಮಾಹಿತಿ ಇದೆ. ಈ ಬೆಳವಣಿಗೆ ಹಲವು ದಿನಗಳಿಂದ ಗಾಳಿಯಲ್ಲಿತ್ತು. ಇದೀಗ ಸುದ್ದಿಯಾಗಿದೆ.

ಈ ಸುದ್ದಿ ಹಮೀದ್ ಹಾಗೂ ರಂಗನಾಥ್ ರವರ ವೃತ್ತಿಜೀವನದ ಬಹುಮುಖ್ಯ ಘಟ್ಟವನ್ನು ಸೂಚಿಸುತ್ತದೆ. ಹಿಂದೆ ರಂಗನಾಥ್ ಸುವರ್ಣ ಸೇರಿದಾಗ, ಅಂದಿನ ಮುಖ್ಯಸ್ಥ ಶಶಿಧರ ಭಟ್ ಸಂಪಾದಕೀಯ ಸಲಹೆಗಾರರಾಗಿ ನೇಮಕಗೊಂಡಿದ್ದರು. ಅದು ಕೆಲವೇ ಕಾಲದವರೆಗೆ. ಈಗ ಕಾಲ ಚಕ್ರ ಮತ್ತೊಂದು ಸುತ್ತು ಮುಗಿಸಿದೆ.ಇದು ಹಮೀದ್ ಕಾಲ.

ನೋ ಡೌಟ್ ಹಮೀದ್ ಕನ್ನಡದ ಕೆಲವೇ ಕೆಲವು ಅತ್ಯುತ್ತಮ ಆಂಕರ್‌ಗಳಲ್ಲಿ ಒಬ್ಬರು. ಅವರನ್ನು ಪತ್ರಕರ್ತ ಎನ್ನುವುದಕಿಂತ, ಉತ್ತಮ ಆಂಕರ್ ಎಂದು ಗುರುತಿಸಿದ್ದೇ ಹೆಚ್ಚು. ಪತ್ರಕರ್ತನಾಗಿ, ಸುದ್ದಿ ಮುಖ್ಯಸ್ಥನಾಗಿ ಹೇಗೆ ಕಾರ್ಯನಿರ್ವಹಿಸುತ್ತಾರೆ ಎಂಬುದು ಸದ್ಯದ ಕುತೂಹಲ.

ರಂಗನಾಥ್ ಅವರ ಅಭಿಮಾನಿಗಳಿಗೆ ಒಂದು ಸಂತಸದ ಸುದ್ದಿಯೆಂದರೆ ಅವರು ಜುಗಲ್ ಬಂದಿ ಮತ್ತು ಪಬ್ಲಿಕ್ ವಾಯ್ಸ್ ಕಾರ್ಯಕ್ರಮಗಳನ್ನು ಮುಂದುವರೆಸಲಿದ್ದಾರೆ. ಎರಡೂ ಕಾರ್ಯಕ್ರಮಗಳು  ಸುವರ್ಣ ನ್ಯೂಸ್ ನಲ್ಲಿ ಜನಪ್ರಿಯವಾಗಿವೆ. ರಂಗನಾಥ್ ಇಲ್ಲದ ದಿನಗಳಲ್ಲಿ ಈ ಕಾರ್ಯಕ್ರಮಗಳು ಬೋರ್ ಹೊಡೆಸುತ್ತಿದ್ದವು. ಇತ್ತೀಚಿಗೆ ಜುಗಲ್ ಬಂದಿಯಲ್ಲಿ ರಂಗನಾಥ್ ಕಾಣಿಸಿಕೊಂಡಿದ್ದು ಕಡಿಮೆ. ಬೇರೆ ಯಾವುದೇ ಹೊಣೆಗಳು ಇಲ್ಲದೇ ಇರುವುದರಿಂದ ಇನ್ನು ಮುಂದೆ ಅವರು ಕಾಣಿಸಿಕೊಳ್ಳಬಹುದು.

ಇದೇನೇ ಇರಲಿ, ರಂಗನಾಥ್ ಇಷ್ಟು ಬೇಗ ಸುವರ್ಣ ನ್ಯೂಸ್‌ನ ಮುಖ್ಯಸ್ಥನ ಹುದ್ದೆಯಿಂದ ಹಿಂದೆ ಸರಿಯಬೇಕಾಗಬಹುದು ಎಂದು ಯಾರೂ ಊಹಿಸಿರಲಿಲ್ಲ. ಸುವರ್ಣಕ್ಕೆ ಕನ್ನಡಪ್ರಭದಿಂದ ವಲಸೆ ಬಂದಾಗ ರಂಗನಾಥ್ ಅತ್ಯುತ್ಸಾಹದಿಂದಲೇ ಕೆಲಸ ಆರಂಭಿಸಿದ್ದರು. ಅದುವರೆಗೆ ಟಿವಿ೯ಗೆ ಯಾವ ರೀತಿಯಲ್ಲೂ ಒಂದು ಸ್ಪರ್ಧೆ ಅನ್ನುವುದೇ ಇರಲಿಲ್ಲ. ರಂಗನಾಥ್ ವೃತ್ತಿಪರತೆ ಇಲ್ಲಿ ಕೆಲಸ ಮಾಡಿತು. ಸುವರ್ಣ ನ್ಯೂಸ್‌ಗೂ ವೀಕ್ಷಕರು ಹುಟ್ಟಿಕೊಂಡರು.

ಕಳೆದ ಆರೇಳು ತಿಂಗಳಿನಿಂದ ಕನ್ನಡ ಮಾಧ್ಯಮ ರಂಗದಲ್ಲಿ ವಿಪರೀತ ಬದಲಾವಣೆಗಳು ನಡೆದವು. ಸುವರ್ಣ ನ್ಯೂಸ್ ಪತ್ರಿಕೆ ಆರಂಭಿಸಿಬೇಕಿದ್ದ ರಾಜೀವ್ ಚಂದ್ರಶೇಖರ್, ಇದ್ದಕ್ಕಿದ್ದಂತೆ ಕನ್ನಡಪ್ರಭದ ಶೇರುಗಳನ್ನು ಕೊಂಡುಕೊಂಡರು. ಟೈಮ್ಸ್ ಸಂಸ್ಥೆಯಿಂದ ವಿಶ್ವೇಶ್ವರ ಭಟ್ ಹೊರಬಂದರು.  ಕನ್ನಡಪ್ರಭಕ್ಕೆ ಸಂಪಾದಕರೂ ಆದರು. ಸುವರ್ಣ ನ್ಯೂಸ್‌ನ ಸಂಪಾದಕರಾಗಬೇಕಿದ್ದ ರವಿ ಹೆಗಡೆ ಉದಯವಾಣಿಗೆ ಸಂಪಾದಕರಾದರು. ಕನ್ನಡಪ್ರಭ ಮತ್ತು ಉದಯವಾಣಿಗಳ ಸಂಪಾದಕರಾಗಿದ್ದ ಶಿವಸುಬ್ರಹ್ಮಣ್ಯ ಹಾಗು ತಿಮ್ಮಪ್ಪ ಹೆಗಡೆ ಉದ್ಯೋಗ ಕಳೆದುಕೊಂಡರು.

ಈಗ ರಂಗನಾಥ್ ಸರದಿ. ರಂಗನಾಥ್ ಅವರು ಕಸ್ತೂರಿ ನ್ಯೂಸ್ ಚಾನಲ್‌ಗೆ ಮುಖ್ಯಸ್ಥರಾಗಿ ಹೋಗುತ್ತಾರೆ ಎಂಬ ವದಂತಿಗಳಿದ್ದವು. ಆದರೆ ಅವರು ಸದ್ಯಕ್ಕೆ ಸುವರ್ಣದಲ್ಲೇ ಉಳಿಯಲು ನಿರ್ಧರಿಸಿದ್ದಾರೆ. ಮುಂದೆ ಏನೇನಾಗುತ್ತದೋ ಯಾರು ಬಲ್ಲರು?

ಹಮೀದ್ ಪಾಳ್ಯ ಅವರಿಗೆ ನಮ್ಮ ಶುಭಾಶಯಗಳು.

ಅಂದಹಾಗೆ, ಕನ್ನಡಪ್ರಭಕ್ಕೆ ಕೆ.ವಿ.ಪ್ರಭಾಕರ್ ಮತ್ತು ರಾಘವೇಂದ್ರ ಭಟ್ ಸೇರ್ಪಡೆಯಾಗಿದ್ದಾರೆ. ಇಬ್ಬರೂ ವಿಜಯ ಕರ್ನಾಟಕದಲ್ಲಿದ್ದರು. ಭಟ್ಟರ ಹಳೆಯ ಒಡನಾಡಿಗಳು. ಕೆ.ವಿ.ಪ್ರಭಾಕರ್ ಬೆಂಗಳೂರು ವರದಿಗಾರರ ಕೂಟದ ಅಧ್ಯಕ್ಷರೂ ಹೌದು. ಇಬ್ಬರೂ ಈಗ ವಿಕ ತೊರೆದು ಕಪ್ರ ಸೇರಿಕೊಂಡಿದ್ದಾರೆ.  ಈ ಸುದ್ದಿಯನ್ನು ವಿಶ್ವೇಶ್ವರ ಭಟ್ಟರು ತಮ್ಮ ವೆಬ್ ಸೈಟ್ ನಲ್ಲಿ ಅಧಿಕೃತವಾಗಿ ಘೋಷಿಸಿದ್ದಾರೆ.  ಅಲ್ಲಿಗೆ ಭಟ್ಟರೊಂದಿಗೆ ಜತೆಗೂಡಿದವರ ಸಂಖ್ಯೆ ಈಗ ಆರಕ್ಕೆ ಏರಿದೆ.
READ MORE - ಇದೀಗ ಬಂದ ಸುದ್ದಿ: ಹಮೀದ್ ಸುವರ್ಣ ನ್ಯೂಸ್ ಮುಖ್ಯಸ್ಥ

[美女] 北京美女楊冪

Diposkan oleh Batas Langit | 01:41



READ MORE - [美女] 北京美女楊冪



READ MORE - [消閒] N 巾圖鑑 一條 Scarf 九個 Look
READ MORE - [美女] 粉紅 80 後美女 黃馥琳



READ MORE - [科技] 電子浴室鏡 監督你健康
READ MORE - [娛樂] 黃婉曼直播節目再 X 你!


READ MORE - [美女] 大埔滑豆花 迷倒足球寶貝


READ MORE - [新聞] 為條梯 打甩 bra 裸瞓沙灘
READ MORE - [娛樂] 琦溫裸體裸上癮
READ MORE - [新聞] 學生天台野戰 幾百人直擊


READ MORE - [新聞] 青春 Miss 嗒男生 學校做愛


READ MORE - [新聞] 嫖客食霸王餐 鳳姐仆地死攬


READ MORE - [新聞] 蒸餾水變哥士的 幾乎灼爛喉


READ MORE - [新聞] iPod +納米線 心跳叉電


READ MORE - [新聞] 淫亂派對案 佐治古尼作證

[娛樂] 陳豪對大胸情有獨鍾

Diposkan oleh Batas Langit | 00:55


READ MORE - [娛樂] 陳豪對大胸情有獨鍾

ತಸ್ಲೀಮಾ ನಸ್ರೀನ್

 ಕನ್ನಡಪ್ರಭದಲ್ಲಿ ತಸ್ಲೀಮಾ ನಸ್ರೀನ್ ಅವರ ಅನುವಾದಿತ ಲೇಖನವೊಂದು ಪ್ರಕಟಗೊಂಡಿದ್ದು, ಆನಂತರ ರಾಜ್ಯದ ವಿವಿಧ ಭಾಗಗಳಲ್ಲಿ ಗಲಭೆ ನಡೆದಿದ್ದು, ಗಲಭೆಯಲ್ಲಿ ಇಬ್ಬರು ಬಲಿಯಾಗಿದ್ದು, ಮೂಲ ಲೇಖನವನ್ನು ತಿರುಚಲಾಗಿದೆ ಎಂದು ಸ್ವತಃ ತಸ್ಲೀಮಾ ನಸ್ರೀನ್ ಸ್ಪಷ್ಟನೆ ನೀಡಿದ್ದು ನಿಮಗೆ ನೆನಪಿರಬಹುದು. ಕನ್ನಡಪ್ರಭ ಸಾಪ್ತಾಹಿಕದಲ್ಲಿ ಸಿಂಧು ಎಂಬ ಹೆಸರಿನಲ್ಲಿ ಪ್ರಕಟಗೊಂಡ ಈ ಲೇಖನವನ್ನು ಬರೆದಿದ್ದು ಚೇತನಾ ತೀರ್ಥಹಳ್ಳಿಯವರು ಎಂಬ ವದಂತಿಯನ್ನು ಹಬ್ಬಿಸಲಾಗಿತ್ತು. ಇದರಿಂದಾಗಿ ಚೇತನಾ ಸಾಕಷ್ಟು ನೊಂದಿದ್ದರು. ಈಗ ಲೇಖನ ಬರೆದದ್ದು ಯಾರು ಎಂಬುದು ಬಹಿರಂಗವಾಗಿದೆ. ಆ ದಿನಗಳಲ್ಲಿ ತಾವು ಅನುಭವಿಸಿದ ನೋವನ್ನು ಚೇತನಾ ಇದೀಗ ತಮ್ಮ ಬ್ಲಾಗ್‌ನಲ್ಲಿ ಬರೆದಿದ್ದಾರೆ. ಅವರ ಅನುಮತಿ ಪಡೆದು ಈ ಬರಹವನ್ನು ಸಂಪಾದಕೀಯದಲ್ಲಿ ಪ್ರಕಟಿಸಬೇಕು ಎನ್ನುವಷ್ಟರಲ್ಲಿ ಅವರೇ ಈ ಲೇಖನವನ್ನು ಪ್ರಕಟಣೆಗಾಗಿ ಮೇಲ್ ಮಾಡಿದ್ದಾರೆ.  ಚೇತನಾ ಅವರ ಈ ಲೇಖನ ಅವರ ವಿರುದ್ಧ ಪಿತೂರಿ ನಡೆಸಿದವರ ಕಣ್ತೆರೆಸಲಿ ಎಂಬುದು ನಮ್ಮ ಆಶಯ. ಚೇತನಾ ಅವರಿಗೆ ನಮ್ಮ ನೈತಿಕ ಬೆಂಬಲವಿರುತ್ತದೆ  -ಸಂ



ವೈಯಕ್ತಿಕ ವಿಶ್ವಾಸಕ್ಕಿಂತ ಅಗ್ಗದ ಸಾಕ್ಷಿಯೇ ದೊಡ್ಡದಾಗುತ್ತದಾ?


ವರ್ಷದ ಹಿಂದಿನ ಮಾತು. ತಸ್ಲಿಮಾ ಮಾತುಗಳನ್ನ ಮಹಾಶಯರೊಬ್ಬರು ಹುಡುಗಿ ಹೆಸರಲ್ಲಿ ಅನುವಾದಿಸಿ ಕ.ಪ್ರ.ದಲ್ಲಿ ಪ್ರಕಟಿಸಿದ್ದರು. ಪರಿಣಾಮ- ಬೆಂಕಿ ಬಿದ್ದಿತ್ತು. ಎರಡು ಜೀವ ಹೋಗಿತ್ತು. ನಾನು ಆಗ ಕೆಲಸ ಮಾಡುತ್ತಿದ್ದ ಸಂಸ್ಥೆಗೆ ಕಪ್ಪು ಚುಕ್ಕೆ ಅದು. ಜೊತೆಗೆ ವೈಯಕ್ತಿಕ ನಷ್ಟವೂ. ನನ್ನ ಕೆಲವು ಗೆಳೆಯರು, ಮನಸು- ಹೃದಯಗಳೊಂದೂ ಇಲ್ಲದೆ ಬುದ್ಧಿಯಲ್ಲಷ್ಟೆ ಜೀವಿದುವವರು- ಇಂಥವರೆಲ್ಲ ಅದು ನಾನು ಎಂದು ತೀರ್ಮಾನಿಸಿಬಿಟ್ಟಿದ್ದರು. ಕೆಲವರ ಚುಚ್ಚು ಮಾತು, ಮೆಸೇಜುಗಳು, ಕಮೆಂಟುಗಳು ಮತ್ತಷ್ಟು ಜನರ ಹಾದಿ ತಪ್ಪಿಸಿ ನನ್ನೆದುರು ನಿಲ್ಲಿಸಿದ್ದವು. ಈ ಮಧ್ಯೆ ಒಂದೆರಡು ಬೆದರಿಕೆ ಕರೆಗಳೂ ಬಂದು, ನಾನು ಸಂಪಾದಕರ ಬಳಿ ಓಡಿ ರಕ್ಷಣೆ ಕೊಡಿಸುವಂತೆಯೂ ಕೇಳಬೇಕಾಗಿ ಬಂತು.
ಅದೆಲ್ಲ ಈಗ ನಡೆದ ಹಾಗಿದೆ. ಅಂದಿನ ಕ.ಪ್ರ.ಸಂಪಾದಕರು ಮಹಾವಲಸೆಯಿಂದ ಚೇತರಿಸಿಕೊಂಡು ಪತ್ರಿಕೆ ಕಟ್ಟುತ್ತಿದ್ದ ಅವಧಿಯದು. ಮ್ಯಾಗಜಿನ್‌ನ ಸಂಪೂರ್ಣ ಜವಾಬ್ದಾರಿ ಪುರವಣಿ ಸಂಪಾದಕರ ಮೇಲೆಯೆ ಇತ್ತು. ಅಂದಿನ ಸಂಪಾದಕರು ನಂಬಿ ಕೆಟ್ಟರು. ನಂಬಿದ್ದೇ ನನ್ನ ತಪ್ಪು, ಅದು ನನ್ನ ಬೇಜವಾಬ್ದಾರಿತನ ಅಂತ ಆಮೇಲೆ ಬಹಳ ಬಾರಿ ಬಹಳ ಕಡೆ ಅವಲತ್ತುಕೊಂಡಿದ್ದು ಕೇಳಿದ್ದೇನೆ. ಪುರವಣಿ ಸಂಪಾದಕರು ತಮ್ಮ ಗೆಳೆಯ ಕಳಿಸಿಕೊಟ್ಟ ಲೇಖನವನ್ನು ವಿವೇಚನೆ ಇಲ್ಲದೆ ಪ್ರಕಟಿಸಿಬಿಟ್ಟರು. ಆ ಗೆಳೆಯನಾದರೂ ಮತ್ತೊಂದು ಪತ್ರಿಕೆಯ ಕೆಲಸಗಾರನಾಗಿದ್ದ, ಜವಾಬ್ದಾರಿ ಹುದ್ದೆಯಲ್ಲಿದ್ದ, ಹೊರ ಜಗತ್ತಿಗೆ ಬುದ್ಧಿವಂತನಂತೆ ಪೋಸ್ ಕೊಡುವವನಾಗಿದ್ದ. ಆ ಅವಿವೇಕದ ಲೇಖನವನ್ನು ಒಂದು ಹುಡುಗಿಯ ಹೆಸರಲ್ಲಿ ಪ್ರಕಟಿಸಲಾಯ್ತು. ಕೆಲವರು ಅದು ಪುರವಣಿ ಸಂಪಾದಕರೇ ಎಂದೂ, ಕೆಲವರು ಅವರ ಗೆಳತಿ ಇರಬಹುದೆಂದೂ ಊಹಿಸಿಕೊಂಡರು. ಪುರುಸೊತ್ತಿನಲ್ಲಿದ್ದು, ನನ್ನ ಮೇಲೆ ಏನಾದರೊಂದು ಆಕ್ಷೇಪ ಇಟ್ಟುಕೊಂಡಿದ್ದ ಕೆಲವರ ಬಾಯಿಗೆ ನಾನು ಬಿದ್ದೆ.  ಮತ್ತವೇ ಕೋಮುವಾದಿ, ಬಲಪಂಥೀಯ, ಕೇಸರಿ ಮದ್ಯದಂತಹ ಕಿತ್ತೋದ ಡೈಲಾಗುಗಳು, ಕುಹಕಗಳು.
ಚೇತನಾ ತೀರ್ಥಹಳ್ಳಿ
ಅಷ್ಟೆಲ್ಲ ಬೇಸರಪಟ್ಟುಕೊಳ್ಳುವ ಅಗತ್ಯವಿದ್ದಿಲ್ಲ, ಆದರೂ ನೋವಾಗಿಬಿಟ್ಟಿತು. ಆ ಒಂದು ತಿಂಗಳ ನನ್ನ ಒಳಗುದಿ ಹೇಳಿಕೊಳ್ಳಲು ಆಗದಂಥದ್ದು.  ಪತ್ರಕರ್ತ ಮಿತ್ರರು ಕೆಲವರು ಈ ಗಾಸಿಪ್ ಅನ್ನು ಮತ್ತಷ್ಟು ವ್ಯಾಪಕಗೊಳಿಸುವಲ್ಲಿ ಸಕ್ರಿಯರಾಗಿದ್ದ ಬಹಳ ಬೇಸರ ಮಾಡಿತ್ತು. ಕೆಲವರಂತೂ ಕಾಲ್ ಮಾಡಿ  ಆರೋಪವನ್ನು ನನ್ನ ಮೇಲೆ ಹೇರಿದರು. ಅಷ್ಟು ಶ್ರಮ ತೆಗೆದುಕೊಂಡರು.
ಈಗ, ಈಗ ಏನು? ಐದಾರು ತಿಂಗಳ ಹಿಂದಿನಿಂದಲೇ ಜೆಪಿ ಯ ಹೆಸರು ಬಹಿರಂಗಗೊಂಡು ಹರಿದಾಡುತ್ತಿದೆ. ಈಗಲಂತೂ ಅದು ಅಧಿಕೃತವಾಗಿ ಘೋಷಣೆಯಾಗಿದೆ. ಹೊರಗಿನವರ ಮಾತು ಬಿಡಿ, ಪತ್ರಿಕೋದ್ಯಮದ ಒಳಗಿನವರ ಬಗ್ಗೆ ರೇಜಿಗೆಯಾಗುತ್ತಿದೆ. ಅವತ್ತು ಕರೆ ಮಾಡಿ, mail ಮಾಡಿ ದೂಷಿಸುವ ಕಷ್ಟ ತೆಗೆದುಕೊಂಡ ಯಾರಿಗೂ ಇವತ್ತು sorry ಕೇಳಲು ನೆನಪಾಗುತ್ತಿಲ್ಲ. ಗಾಸಿಪ್ ಮಾಡುವವರ ಹಣೆಬರಹವೆ ಇಷ್ಟಲ್ಲ? ಟೊಳ್ಳು ಜನ. ಮರೆವು ಜಾಸ್ತಿ.
ಸಾಲದ್ದಕ್ಕೆ ಈಗ ಪ್ರಣತಿಯ ಭೂತ ಮೆಟ್ಟಿಕೊಂಡಿದೆ. ಅನವಶ್ಯಕವಾಗಿ ನಾನು ನಾನಲ್ಲ ಅನ್ನುವ ಸಮಜಾಯಿಷಿ ಕೊಟ್ಟುಕೊಳ್ಳಬೇಕಾಗಿದೆ. ಅದು ಕೂಡ ಸುಮ್ಮನೆ ಗಾಸಿಪ್ ಎಂದು ಗೊತ್ತಿದ್ದೇ ಸಾಂಕ್ರಾಮಿಕ ಹರಡುವಿಕೆಯ ವೈರಸ್ ಗಳಾಗುತ್ತಿದ್ದಾರೆ ಸಹಪತ್ರಕರ್ತರು. ಅದನ್ನು ಇಲ್ಲಿಗೇ ನಿಲ್ಲಿಸಿಬಿಟ್ಟರೆ ಒಳ್ಳೆಯದು. ಇಲ್ಲವಾದರೆ, ನನಗೆ ಕೆಟ್ಟದ್ದು.
ಇನ್ನೂ ಹೇಳಬೇಕನಿಸಿದ್ದು-ಬ್ಲಾಗ್ ಜಗತ್ತಿನ ತುಂಬ ಪತ್ರಿಕೋದ್ಯಮದ ವಾಚ್‌ಡಾಗ್‌ಗಳು ತುಂಬಿಕೊಳ್ಳುತ್ತಿದ್ದಾರೆ. ಕೆಲವರು ಹಿಂದೆಮುಂದೆ ನೋಡದೆ ಸ್ವಾರಸ್ಯಕರ ಗಾಸಿಪ್, ಅರೆಬರೆ ಮಾಹಿತಿ, ತಪ್ಪು ಅರ್ಥ ಕೊಡುವ ಸುದ್ದಿಗಳನ್ನೆಲ್ಲ ಪ್ರಕಟಿಸುತ್ತಿದ್ದಾರೆ. ಕೆಲವರು ಚೆನ್ನಾದ ವಿಶ್ಲೆಷಣೆ ನಡೆಸ್ತಿದ್ದರೂ ನಡುನಡುವೆ ಬಕೆಟ್ ಇಟ್ಟುಕೊಂಡು ಮುನ್ನಡೆಯುತ್ತಿದ್ದಾರೆ. (ಬಕೆಟ್ ಈಗ ಸಖತ್ ಚಾಲ್ತಿಯಲ್ಲಿರುವ ಪದ. ಅದಕ್ಕೆ ಪರ್ಯಾಯ ಸಿಗ್ತಿಲ್ಲ). ಯಾರಿಗೂ ಇದರ ಪರಿಣಾಮದ ಅರಿವು ಇದ್ದ ಹಾಗಿಲ್ಲ. ಪತ್ರಿಕೆ, ವೆಬ್ ಗಳಲ್ಲಿ ಬರುತ್ತಿರುವ ಸುದ್ದಿಗಳಿಂದಾಗಿ ಜರ್ನಲಿಸಮ್ ವಿದ್ಯಾರ್ಥಿಗಳು, ಅದರಲ್ಲೂ ಹೆಣ್ಣುಮಕ್ಕಳು ಇತ್ತ ತಲೆ ಹಾಕಲು ಹೆದರುವಂಥ ಮಾಹೋಲ್ ನಿರ್ಮಾಣವಾಗ್ತಿದೆ. ಇಷ್ಟು ದಿನ ಜನ ರಾಜಕಾರಣ ಅಂದರೆ ಮೂಗು ಮುರೀತಿದ್ದರು, ಇನ್ನು ಖಚಡಾ ಕೆಲಸಕ್ಕೆಲ್ಲ ಇದೇನು ಜರ್ನಲಿಸಮ್ಮಾ ಅಂತ ಕೇಳುವ ಕಾಲವೂ ಬರಬಹುದು. ಹಾಗಂತ ನಾವು ಬೇರೆ ಬೇರೆ ಪತ್ರಿಕೆಯಲ್ಲಿದ್ದೂ ಗೆಳೆತನ ಇಟ್ಟುಕೊಂಡಿರುವ ಹೆಣ್ಣುಮಕ್ಕಳು ಆನ್‌ಲೈನ್ ಚಾಟ್‌ನಲ್ಲಿ ಹತಾಶರಾಗ್ತಿದೇವೆ.
ಎಲ್ಲಿಂದ ಎಲ್ಲಿಗೆ ಏನು ಲಿಂಕೋ? ತಮ್ಮಂದಿರಲ್ಲಿ ಒಬ್ಬ, ನನ್ನ ಕ್ಲಾರಿಫಿಕೇಶನ್ ಗಳ ನಂತರವೂ ನನ್ನ ಬಗ್ಗೆ ಅನುಮಾನ ಇರಿಸಿಕೊಂಡಿದ್ದ. ಈಗ ತಾನೆ ಯಾವುದೋ ಬ್ಲಾಗ್ ನೋಡಿ ‘ಸಿಂಧು ನೀವಲ್ಲ ಅಂತ ಖಾತ್ರಿ ಆಯ್ತು’ ಅಂತ ಸರ್ಟಿಫಿಕೇಟ್ ಕೊಟ್ಟ. ಹಾಗಾದರೆ ನಂಬಿಕೆ, ಅಧಿಕೃತತೆಯ ಮಾನದಂಡ ಏನು? ವೈಯಕ್ತಿಕ ವಿಶ್ವಾಸಕ್ಕಿಂತ ಕಂಡು ಕೇಳಿಲ್ಲದ ಮುಖಗಳ ಮಾತೇ ಪ್ರಮಾಣವಾಗುತ್ತದಲ್ಲ, ಯಾಕೆ? ಅವತ್ತು ಗಾಸಿಪ್ ನಂಬಿ ನೋವು ಕೊಟ್ಟವರು ನಂಬಿದ್ದೂ ಇಂಥವೇ ಸಾಕ್ಷಿಗಳನ್ನು. ವ್ಯಕ್ತಿಯನ್ನು ಸ್ವಂತ ಅನ್ನಿಸಿಕೆ, ಅಳತೆಯಿಂದ ತೂಗಿ ನೋಡಲು ಸಾಧ್ಯವೇ ಇಲ್ಲವಾ? ಯಾರನ್ನ ಕೇಳುವುದು?
ಇಷ್ಟಕ್ಕೂ ಇಲ್ಲಿ ಆ ಹುಡುಗ, ಅಗ್ಗದ ಸಾಕ್ಷಿಗಳನ್ನು ನಂಬುವ ಮನಸ್ಥಿತಿಗಳ ಪ್ರತಿನಿಧಿ ಮಾತ್ರ...
READ MORE - ತಸ್ಲೀಮಾ ನಸ್ರೀನ್, ಜೆಪಿ, ಚೇತನಾ ತೀರ್ಥಹಳ್ಳಿ ಮತ್ತು ಒಂದು ವಿವಾದ

 ಜಾಡು ತಪ್ಪಿರುವ ಅಂಕಣಗಳ ಕುರಿತು ಬಿ.ಕೆ.ಸುಮತಿ ಮಾರ್ಮಿಕವಾಗಿ ಬರೆದಿದ್ದರು. ಈ ಚರ್ಚೆಯನ್ನು ಆನಂದ್ ಪಾಟೀಲ್ ಅವರ ಮೂಲಕ ವಿಸ್ತರಿಸುತ್ತಿದ್ದೇವೆ. ಆನಂದ್ ಪಾಟೀಲರು ಕನ್ನಡ ಪತ್ರಿಕೆಗಳ ಅಂಕಣಗಳ ಪುಟ್ಟ ಚರಿತ್ರೆಯನ್ನೇ ಇಲ್ಲಿ ಒದಗಿಸಿದ್ದಾರೆ. ಚರ್ಚೆ ಮುಂದುವರೆಯಲಿ.-ಸಂ.

ಬಿ.ಕೆ. ಸುಮತಿ ಅವರ ಅಂಕಣಗಳನ್ನು ಕುರಿತ ಬರಹ ತುಂಬ ಕುತೂಹಲ ಹುಟ್ಟಿಸಿತು. ಏಕೆಂದರೆ, ನಾನು ಮಾಧ್ಯಮ ವ್ಯಾಸಂಗದಲ್ಲಿ ಸ್ನಾತಕೋತ್ತರ ಪದವಿ ಪಡೆದು, ಬ್ಯಾಂಕ್‌ನಲ್ಲಿ ಅಧಿಕಾರಿಯಾಗಿದ್ದರೂ ಮಾಧ್ಯಮದಲ್ಲಿ ಸಂಶೋಧನೆ ಮುಂದುವರೆಸಲು ಅಂಕಣ ಸಾಹಿತ್ಯ ವನ್ನೇ ಆರಿಸಿಕೊಂಡಿರುವ ಕಾರಣಕ್ಕೆ.

ಕನ್ನಡದಲ್ಲಿ ಅಂಕಣಗಳ ಇತಿಹಾಸ ರೋಚಕವಾಗಿದೆ. ಸುಮತಿ ಅವರು ಹೇಳಿರುವುದಕ್ಕೆ ಪೂರಕವಾಗಿ ಹೇಳಲು ಇನ್ನೂ ಅನೇಕ ವಿಷಯಗಳಿವೆ. ಉದಾಹರಣೆಗೆ ಇಲ್ಲಿ ಕೆಲವನ್ನು ಮಾತ್ರ ನೋಡಬಹುದು. (ಎಲ್ಲವನ್ನೂ ನೋಡಹೊರಟರೆ ಸಂಶೋಧನಾ ಸಂಪ್ರಬಂಧ ಇಲ್ಲೇ ಬರೆಯಬೇಕಾದೀತು !)

* ಕರ್ನಾಟಕದ ಏಕೀಕರಣದ ಬಗ್ಗೆ ಜನತೆಯನ್ನು ಎಚ್ಚರಿಸಿದ್ದು ಅಂದಿನ ಖ್ಯಾತ ಸಾಹಿತಿಗಳು- ತಮ್ಮ ಪತ್ರಿಕಾ ಅಂಕಣಗಳ ಮೂಲಕ.

* ಅಂದಂದಿನ ಸಂಗತಿಗಳನ್ನು ವಿಮರ್ಶಿಸುವ, ವಿಡಂಬಿಸುವ ಉದ್ದೇಶದ ಟಿಯೆಸ್ಸಾರ್ ಅವರ ಛೂಬಾಣ ಅಂಕಣ ಪತ್ರಿಕೋದ್ಯಮದಲ್ಲೇ ವಿಶಿಷ್ಟ. ರಾಜಕಾರಣಿಗಳಿಗೆ ಚಾಟಿಯೇಟು ಕೊಡುತ್ತಿದ್ದ ಅದರ ಮೂಲಕ ಸರ್ಕಾರದ ಅನೇಕ ಕೆಟ್ಟ ನಿರ್ಧಾರಗಳು ಕೂಡಲೇ ಸರಿಯಾಗುತ್ತಿದ್ದವು.

* ಸುಧಾ ವಾರಪತ್ರಿಕೆಗೆ ಜಿ.ಪಿ. ರಾಜರತ್ನಂ ಅವರಂತಹ ದೊಡ್ಡಸಾಹಿತಿಗಳೇ ಹತ್ತಾರು ವರ್ಷ ಅಂಕಣ ಬರೆದು, ಬೌದ್ಧ, ಜೈನ ಸಾಹಿತ್ಯಗಳ ಕಥೆಗಳನ್ನು, ಇತರ ಧರ್ಮಗಳ ಬೋಧಪ್ರದ ಕಥೆಗಳನ್ನು ಓದುಗರಿಗೆ ಪರಿಚಯಿಸಿದರು. ಅವರ ಅಂಕಣಗಳಿಗೆ ಓದುಗರು ಚಡಪಡಿಸಿ ಕಾಯುತ್ತಿದ್ದರು. ಅವರ ವಿಚಾರರಶ್ಮಿ ಅಂಕಣ ಬುದ್ಧಿಗೆ ಚುರುಕು, ಮನಸ್ಸಿಗೆ ತಂಪು ಕೊಡುತ್ತಿತ್ತು. ವ್ಯಕ್ತಿತ್ವ ವಿಕಸನ ಪದವೇ ಗೊತ್ತಿಲ್ಲದಿದ್ದ ಕಾಲದಲ್ಲಿ ಅದನ್ನೇ ಮಾಡುತ್ತಿತ್ತು !

* ಖ್ಯಾತ ಸಾಹಿತಿ ನಿರಂಜನ ಅವರು ಪ್ರಜಾವಾಣಿ ಸೇರಿ ವಿವಿಧ ಪತ್ರಿಕೆಗಳಲ್ಲಿ ಬರೆದ ಅಂಕಣಗಳು ಆ ಕಾಲದ ಅಮೂಲ್ಯ ದಾಖಲೆಗಳಾಗಿವೆ. ತಮ್ಮ ಪ್ರಿಯತಮೆ ಅನುಪಮಾಗೆ ಪತ್ರ ಬರೆದಂತೆ ಅವರು ಅಂಕಣ ಬರೆಯುತ್ತಿದ್ದರು.

* ಇನ್ನು ಅಂಕಣಗಳ ಚಕ್ರವರ್ತಿ ಎಂದು ಕರೆಯಬಹುದಾದ  ಎಚ್ಚೆಸ್ಕೆ  ಅವರು ಸ್ಮರಣೀಯರು. ಸುಧಾ ಪತ್ರಿಕೆ ಆರಂಭವಾದ ದಿನದಿಂದ ಅವರ ಎರಡು ಅಂಕಣಗಳು ಸತತ ಜನಪ್ರಿಯವಾಗಿದ್ದವು. ಇಂಟರ್‌ನೆಟ್ ಇಲ್ಲದಿದ್ದ ಕಾಲದಲ್ಲಿ ಎಚ್ಚೆಸ್ಕೆ ಅವರು ಅದು ಹೇಗೆ ವಿಷಯಗಳನ್ನು ಅಷ್ಟು ಖಚಿತವಾಗಿ ಸಂಗ್ರಹಿಸುತ್ತಿದ್ದರೋ ದೇವರಿಗೇ ಗೊತ್ತು !!

* ಇವೆಲ್ಲಕ್ಕಿಂತ ಮುಖ್ಯವಾಗಿ ಅಂಕಣಗಳ ಆಚಾರ್ಯ ಪಾ.ವೆಂ. ಆಚಾರ್ಯ ಅವರನ್ನು ಮರೆಯುವಂತೆಯೇ ಇಲ್ಲ. ಸಂಯುಕ್ತ ಕರ್ನಾಟಕ, ಕಸ್ತೂರಿ ಬಳಗದಲ್ಲಿ ಅವರು ನಿರಂತರವಾಗಿ ಬರೆದ ಪದಪದಾರ್ಥ ಮತ್ತು ಇತರ ಅಂಕಣಗಳು ಪತ್ರಿಕಾ ಸಾಹಿತ್ಯದ ಅಮೂಲ್ಯ ದಾಖಲೆಗಳಾಗಿವೆ.

* ಸುರೇಂದ್ರ ದಾನಿ ಮತ್ತಿತರ ಅಂಕಣಕಾರರು ಬಹಳ ವರ್ಷ ಸಂಯುಕ್ತ ಕರ್ನಾಟಕದಲ್ಲಿ ಬರೆದಿದ್ದಾರೆ. ಮಂಗಳೂರಿನ ನವಭಾರತ ಪತ್ರಿಕೆಯಲ್ಲಿ ವಾರದ ಅಂಕಣಗಳು ಆಕರ್ಷಕವಾಗಿದ್ದವು.

* ಕಾಮಧೇನು ಅನ್ನುವುದು ಸುಮತಿ ಹೇಳಿದಂತೆ ಸುಧಾ ಪತ್ರಿಕೆಯ ಅಂಕಣದ ಹೆಸರಲ್ಲ- ಅದರ ಮಹಿಳಾ ಲೇಖನಗಳ ವಿಭಾಗದ ಹೆಸರು. ಯಾರು ಬೇಕಾದರೂ ಅದಕ್ಕೆ ಲೇಖನ ಬರೆಯಬಹುದಿತ್ತು.

* ಹಾ.ಮಾ. ನಾಯಕರು ಪ್ರಜಾಮತಕ್ಕೆ ಮಾತ್ರವಲ್ಲ- ಪ್ರಜಾವಾಣಿ, ಸುಧಾ, ತರಂಗ ಪತ್ರಿಕೆಗಳಿಗೂ ನಿರಂತರ ಅಂಕಣಗಳನ್ನು ಬರೆದರು. ಅವರ ಎಲ್ಲ ಅಂಕಣಗಳ ಹೆಸರು ಸಂಗತ, ಸೂಲಂಗಿ ಇತ್ಯಾದಿ ಸಕಾರ ದಿಂದಲೇ ಆರಂಭವಾಗುತ್ತವೆ. ಮತ್ತೂ ವಿಶೇಷವೆಂದರೆ ಅವರು ತಮ್ಮ ಅಂಕಣಗಳ ಸಂಕಲನಕ್ಕೆ ಕೇಂದ್ರ ಸಾಹಿತ್ಯ ಅಕಾಡೆಮಿ ಬಹುಮಾನವನ್ನೂ ಪಡೆದು, ಪತ್ರಿಕಾ ಸಾಹಿತ್ಯಕ್ಕೆ ದೊಡ್ಡ ಮರ್ಯಾದೆ ತಂದುಕೊಟ್ಟರು. ಅಂದಿನಿಂದ ರಾಜ್ಯ ಸಾಹಿತ್ಯ ಅಕಾಡೆಮಿಯೂ ಅಂಕಣ ಸಾಹಿತ್ಯಕ್ಕೆ ಮಾನ್ಯತೆ ಕೊಡುತ್ತಿದೆ.

*ಉದಯವಾಣಿಯಲ್ಲಿ ಬಹಳಕಾಲ ಬಂದ ಕು.ಶಿ. ಹರಿದಾಸ ಭಟ್ಟರ ಕುಶಲೋಪರಿ ಅಂಕಣ, ವಿವೇಕ ರೈ ಅವರ ಗಿಳಿಸೂವೆ ಅಂಕಣ ಜನಪ್ರಿಯವಾಗಿತ್ತು. ತರಂಗದ ಸಂಪಾದಕರಾಗಿದ್ದ ಸಂತೋಷಕುಮಾರ ಗುಲ್ವಾಡಿ ಅವರ ಅಂತರಂಗ ಬಹಿರಂಗ ಆ ಕಾಲದ ಬಹಳ ಜನಪ್ರಿಯ ಸಂಪಾದಕೀಯ ಅಂಕಣವಾಗಿತ್ತು. ತುಷಾರದ ಸಂಪಾದಕರಾಗಿದ್ದ ಎ. ಈಶ್ವರಯ್ಯ ಅವರೂ ತುಂಬ ವರ್ಷ ಅಂಕಣ ಬರೆದರು.

* ವೈಯೆನ್ಕೆ ಅವರು ಕನ್ನಡಪ್ರಭದಲ್ಲಿ ಬರೆದ ವಂಡರ್ ಕಣ್ಣು ಒಂದು ವಿಶೇಷ ಅಂಕಣವಾಗಿತ್ತು.

* ಓದುಗರ ಜೊತೆ ಟಚ್ ಇಟ್ಟುಕೊಳ್ಳುವ ಪ್ರಶ್ನೋತ್ತರ ಅಂಕಣಗಳಲ್ಲಿ ಸುಧಾದ ನೀವು ಕೇಳಿದಿರಿ ಗೆ ಅಗ್ರಸ್ಥಾನ. ಅದರಲ್ಲಿ ಉತ್ತರ ಕೊಡುತ್ತಿದ್ದವರು ಅಂತಿಂತಹವರಲ್ಲ- ಸ್ವತಃ ಖ್ಯಾತ ಸಾಹಿತಿ ಬೀಚಿ ಅವರೇ! ದಶಕಗಳ ಕಾಲ ಅವರು ಓದುಗರನ್ನು ಇನ್ನಿಲ್ಲದಂತೆ ರಂಜಿಸಿದರು. ಅವರ ಮರಣಾನಂತರ ಅ.ರಾ. ಮಿತ್ರ, ಅ.ರಾ.ಸೇ., ಕೇಶವಮೂರ್ತಿ ಮೊದಲಾದವರು ಮುಂದುವರೆಸಿದರು. ಇಂದಿನ ಅನೇಕ ಲೇಖಕರ ಹೆಸರು ಮೊದಲು ಪತ್ರಿಕೆಯಲ್ಲಿ ಪ್ರಕಟವಾದದ್ದು ಈ ಅಂಕಣದಲ್ಲಿ- ಪ್ರಶ್ನೆ ಕೇಳಿದಾಗ!

* ಸುಧಾ ಪತ್ರಿಕೆಯ ಇಂತಹ ಅಪೂರ್ವ ಅಂಕಣಗಳನ್ನು ರೂಪಿಸಿದ ಅದರ ಪ್ರಥಮ ಸಂಪಾದಕ ಇ.ಆರ್. ಸೇತೂರಾಮ್ ಅವರು, ವಾರಪತ್ರಿಕೆಗಳಿಗೆ ಒಂದು ಒಳ್ಳೆಯ ಮಾದರಿಯನ್ನು ನಿರ್ಮಿಸಿದರು ಎಂಬ ಮಹತ್ವದ ಅಂಶವನ್ನು ನೆನಪಿಸಿಕೊಳ್ಳಬೇಕು.

* ಪಾಟೀಲ ಪುಟ್ಟಪ್ಪ ಅವರು ಲೇಖನಗಳಿಂದ ಮಾತ್ರವಲ್ಲದೆ ತಮ್ಮ ಅಂಕಣ ಬರಹಗಳಿಂದಲೂ ತುಂಬ ಖ್ಯಾತಿ ಪಡೆದರು ಎಂಬುದನ್ನು ಮರೆಯುವಂತಿಲ್ಲ.

* ಪ್ರಶ್ನೋತ್ತರ ಅಂಕಣಗಳಲ್ಲಿ ವೈಯೆನ್ಕೆ ಚಮತ್ಕಾರದ ಉತ್ತರ ಕೊಡುತ್ತಿದ್ದ ಘ್ನಾನಪೀಠ ಜನಪ್ರಿಯವಾಗಿತ್ತು. ಲಂಕೇಶ್ ಪತ್ರಿಕೆ, ಹಾಯ್ ಬೆಂಗಳೂರುಗಳ ಪ್ರಶ್ನೋತ್ತರ ಅಂಕಣಗಳು ರಂಜನೀಯ.

* ವಿವಿಧ ವಿಷಯಗಳನ್ನು ಕುರಿತು ಬರೆಸುವ ಅಂಕಣಗಳಲ್ಲಿ ಆರೋಗ್ಯಕ್ಕೆ ಮೊದಲ ಸ್ಥಾನ. ಅನುಪಮಾ ನಿರಂಜನ ಅವರೇ ಸ್ವಾಸ್ಥ್ಯ- ಸಲಹೆ ಪ್ರಶ್ನೋತ್ತರ ಅಂಕಣ ಬಹಳ ವರ್ಷ ಬರೆದು ಇನ್ನಿಲ್ಲದ ಜನಪ್ರಿಯತೆ ಗಳಿಸಿದರು. ನಂತರ ಅನೇಕ ವೈದ್ಯ ಬರಹಗಾರರು ಬಂದರು. ಅವರಲ್ಲಿ ಸಿ.ಆರ್. ಚಂದ್ರಶೇಖರ್ ತುಂಬ ಪತ್ರಿಕೆಗಳಲ್ಲಿ ಅಂಕಣಗಳನ್ನು ಬರೆದಿದ್ದಾರೆ.

* ಲೈಂಗಿಕ ಆರೋಗ್ಯ ಕುರಿತ ಪ್ರಶ್ನೋತ್ತರ ಅಂಕಣಗಳು ವಿಶಿಷ್ಟವಾಗಿವೆ. ವೈದ್ಯರಾದ ಗೋಪಾಲಕೃಷ್ಣರಾವ್ ಅವರ ಪತ್ರಿಕೆಯ ಅಂಕಣ ಬಹಳ ಜನಪ್ರಿಯವಾಗಿತ್ತು. ಪ್ರಜಾಮತದಲ್ಲಿ ಬರುತ್ತಿದ್ದ ಗುಪ್ತ ಸಮಾಲೋಚನೆ ಅದರ ಪ್ರಸಾರವನ್ನು ಲಕ್ಷ ದಾಟಿಸಿತ್ತು. ಅದರ ಸಂಪಾದಕರಾಗಿದ್ದ ಮ.ನ. ಮೂರ್ತಿ ಅವರೇ ಅದರಲ್ಲಿ ಉತ್ತರ ಕೊಡುತ್ತಿದ್ದರಂತೆ. ನಂತರ ಉದಯವಾಣಿಯ ಮಹಿಳಾ ಸಂಪದದಲ್ಲಿ ಪದ್ಮಿನಿ ಪ್ರಸಾದ್ ಅವರ ಪ್ರಶ್ನೋತ್ತರ ಅಂಕಣ ಅವರಿಗೆ ತುಂಬ ಜನಪ್ರಿಯತೆಯನ್ನು, ಟಿ.ವಿ. ವಾಹಿನಿಗಳಲ್ಲಿ ಅಂತಹ ಕಾರ್ಯಕ್ರಮಗಳ ಟ್ರೆಂಡ್ ಅನ್ನು ತಂದಿತು. ಸುಧಾದಲ್ಲಿ ವಿನೋದ ಛಬ್ಬಿ ಆ ರೀತಿಯ ಅಂಕಣ ಬರೆದರು.

* ಇನ್ನು ಜ್ಞಾನವಿಜ್ಞಾನ ಕುರಿತ ಅಂಕಣಗಳಲ್ಲಿ ಸುಧಾದಲ್ಲಿ ವಾಸುದೇವ್ ಅವರು ಮಕ್ಕಳಿಗಾಗಿ ಬರೆಯುತ್ತಿರುವ ವಿಶಿಷ್ಟ ಅಂಕಣ ತುಂಬಾ ಅಮೂಲ್ಯವಾದದ್ದು. ಸದ್ದಿಲ್ಲದೆ ಸತತ ಮೂರೂವರೆ ದಶಕಗಳ ಕಾಲದಿಂದ ಅಂಕಣ ಬರೆಯುತ್ತಿರುವ ಶಾಲಾಶಿಕ್ಷಕ ವಾಸುದೇವ್ ಅವರ ಅಮೂಲ್ಯ ಸೇವೆಗೆ ಯಾವ ಪ್ರಶಸ್ತಿ ಕೊಟ್ಟರೂ ಸಾಲದು.

* ಇನ್ನೊಂದು ನೆನಪಿಸಿಕೊಳ್ಳಬೇಕಾದ್ದು ನಾಗೇಶ ಹೆಗಡೆ ಪ್ರಜಾವಾಣಿಯಲ್ಲಿ ಇಪ್ಪತ್ತೈದು ವರ್ಷಗಳಿಂದ ಸತತ ದಾಖಲೆಯಾಗಿ ಬರೆಯುತ್ತಿರುವ ವಿಜ್ಞಾನ ವಿಶೇಷ ಅಂಕಣ.

* ಸಂಸ್ಕೃತಿ ಕುರಿತ ಅಂಕಣಗಳಲ್ಲಿ ರಂಗಭೂಮಿ ಮತ್ತು ಸಿನಿಮಾತು ಅಂಕಣಗಳನ್ನು ಬರೆದ ಬಿ.ವಿ. ವೈಕುಂಠರಾಜು ನೆನಪಾಗುತ್ತಾರೆ. ಅವು ಅಂದಿನ ಬೆಳವಣಿಗೆಗಳ ಅಮೂಲ್ಯ ದಾಖಲೆಗಳು. ಸಿನಿಮಾ ಕುರಿತು ಇಂದಿಗೂ ಹಲವು ಜನಪ್ರಿಯ ಅಂಕಣಗಳಿವೆ.

* ಕ್ರೀಡಾ ಅಂಕಣಗಳಲ್ಲಿ ಪ್ರಜಾವಾಣಿ, ಸುಧಾಗಳಲ್ಲಿ ಸೂರಿ ಬರೆದ ಅಂಕಣಗಳು ಖ್ಯಾತಿ ಪಡೆದಿದ್ದವು. ಗೋಪಾಲ ಹೆಗಡೆ ಮತ್ತೊಬ್ಬ ಹೆಸರಿಸಬಹುದಾದ ಅಂಕಣಕಾರ.

* ಕಸ್ತೂರಿಯ ವಿಶಿಷ್ಟ ನಿಮ್ಮ ಶಬ್ದಭಂಡಾರ ಬೆಳೆಯಲಿ ಅಂಕಣ ನಿಜಕ್ಕೂ ತಲೆಮಾರುಗಳ ಜನರ ಭಾಷೆಯನ್ನು ಬೆಳೆಸಿದೆ. ಪದಬಂಧ ದೈನಿಕ ಅಂಕಣಗಳ ಜನಪ್ರಿಯತೆ ಕುರಿತು ಎರಡು ಮಾತೇ ಇಲ್ಲ! ನಂತರ ಕ್ವಿಜ್‌ಗಳು, ಸುಡೊಕು ಅಂಕಣಗಳ ಕಾಲ ಬಂತು. ಚುಟುಕು ಮಾಹಿತಿಗಳ ದೈನಿಕ ಚಿಕ್ಕ ಅಂಕಣಗಳನ್ನು ಕನ್ನಡಪ್ರಭ ದಶಕಗಳ ಹಿಂದೆಯೇ ಆರಂಭಿಸಿ ಜನಪ್ರಿಯಗೊಳಿಸಿತು.

* ಕೃಷಿ ಕುರಿತ ಅಂಕಣಗಳಲ್ಲಿ ಪ್ರಜಾವಾಣಿಯ ಬದುಕಿನ ಬೆನ್ನೆಲುಬು ಬೇಸಾಯ ಅಂದಿನ ಕಾಲದಲ್ಲಿ ಜನಪ್ರಿಯವಾಗಿದ್ದ ಅಂಕಣ. ಶ್ರೀಪಡ್ರೆ, ಶಿವಾನಂದ ಕಳವೆ, ಅಡ್ಡೂರು ಕೃಷ್ಣರಾವ್, ಜಯಣ್ಣ ಮೊದಲಾದ ಹಲವು ಅಂಕಣಕಾರರು ಇಂದಿಗೂ ಬರೆಯುತ್ತಿದ್ದಾರೆ.

* ಗ್ರಾಹಕರ ಹಕ್ಕು ಕುರಿತು ಉದಯವಾಣಿಯಲ್ಲಿ ರವೀಂದ್ರನಾಥ ಶ್ಯಾನಭಾಗ, ಮಾಹಿತಿ ಹಕ್ಕು ಕುರಿತು ವೈ.ಜಿ. ಮುರಳೀಧರ, ಮಕ್ಕಳ ಹಕ್ಕು ಕುರಿತು ವಾಸುದೇವ ಶರ್ಮ ಅಂಕಣ ಬರೆದಿದ್ದಾರೆ. ಅಂತಹ ವಿಶೇಷ ಉಪಯುಕ್ತ ವಿಷಯಗಳ ಬಗ್ಗೆ ಉದಯವಾಣಿ ಅಂಕಣಗಳನ್ನು ಬರೆಸಿರುವುದು ಉಲ್ಲೇಖನೀಯ.

* ವಿಡಂಬನೆಯ ಅಂಕಣಗಳಲ್ಲಿ ಪಾ.ವೆಂ. ಹೆಸರು ನೆನಪಾಗುತ್ತದೆ. ಕು.ಗೋ. ಅವರೂ ಅಂತಹ ಅಂಕಣ ಬರೆದರು. ಆಮೇಲೆ ಸುಧಾದಲ್ಲಿ ಜಿ.ಎಸ್. ಸದಾಶಿವ ಮತ್ತು ಆನಂದ ಬರೆಯುತ್ತಿದ್ದ ಅಂಕಣದಲ್ಲಿ ಹಾಸ್ಯ, ವಿಡಂಬನೆ ತುಂಬಿರುತ್ತಿತ್ತು. ಡುಂಡಿರಾಜ್ ಅವರು ವಿಜಯ ಕರ್ನಾಟಕದಲ್ಲಿ ನಾಲ್ಕು ವರ್ಷ ಬರೆದ ವಿಡಂಬನೆ ಅಂಕಣ ತುಂಬ ಜನಪ್ರಿಯವಾಯಿತು. ನಂತರ ಅವರು ಕೆಲಕಾಲ ಪ್ರಜಾವಾಣಿಯಲ್ಲಿ  ಡುಂಡಿಮ ಅಂಕಣ ಬರೆದರು. ಉದಯವಾಣಿಯಲ್ಲಿ ಆರ್. ಪೂರ್ಣಿಮಾ ಸ್ವಲ್ಪಕಾಲ ಎಂಥದು ಮಾರಾಯ್ತಿ! ವಿಡಂಬನೆ ಅಂಕಣ ಬರೆದರು. ಇನ್ನೂ ಹಲವರು ಇಂತಹ ಅಂಕಣಗಳನ್ನು ಬರೆದಿದ್ದಾರೆ.

* ಕಾನೂನು ಅರಿವು ಪ್ರಸಾರ ಮಾಡುವ ಅಂಕಣಗಳು ಕನ್ನಡದಲ್ಲಿ ಬರುತ್ತಿವೆ. ಕನ್ನಡಪ್ರಭದಲ್ಲಿ ವಕೀಲ ಮೂರ್ತಿ ಅವರು ದಶಕಗಳ ಕಾಲ ನೀವು ಮತ್ತು ಕಾನೂನು ಅಂಕಣ ಬರೆದರು. ಈಗಲೂ ಆ ಅಂಕಣ ಜನಪ್ರಿಯವಾಗಿ, ಉಪಯುಕ್ತವಾಗಿದೆ. ಉದಯವಾಣಿಯಲ್ಲಿ ಮಹಿಳೆಯರಲ್ಲಿ ಕಾನೂನು ಅರಿವು ಮೂಡಿಸಲು ಹೇಮಲತಾ ಮಹಿಷಿ ಅವರು ಬರೆಯುವ ಸಬಲೆ-ಸಲಹೆ ಅಂಕಣ ಜನಪ್ರಿಯ. ಸುಧಾದಲ್ಲಿ ಗೀತಾ ಕೃಷ್ಣಮೂರ್ತಿ ಕಾನೂನು ಅಂಕಣವಿದೆ.

* ಉದಯವಾಣಿಯಲ್ಲಿ ನಮ್ಮ ಬೆಂಗಳೂರು ಪುರವಣಿಯಲ್ಲಿ ಸುರೇಶ ಮೂನ ಬೆಂಗಳೂರಿನ ಇತಿಹಾಸ ಕುರಿತು ಬರೆದ ಸಾವಿರದ ಐನೂರಕ್ಕೂ ಹೆಚ್ಚಿನ ಅಂಕಣ ಬರಹಗಳು ಪತ್ರಿಕೋದ್ಯಮದ ದಾಖಲೆಯಾಗಿದೆ.

* ಇನ್ನು ರಾಜಕೀಯ ಅಂಕಣಗಳದೇ ರೋಚಕ ಇತಿಹಾಸ. ಅದರಲ್ಲಿ ಸಿ.ವಿ. ರಾಜಗೋಪಾಲ, ವಡ್ಡರ್ಸೆ ರಘುರಾಮ ಶೆಟ್ಟಿ ಅವರ ಅಂಕಣಗಳನ್ನು ಜನ ಮರೆತಿಲ್ಲ. ಪತ್ರಿಕೋದ್ಯಮದ ಇತಿಹಾಸದಲ್ಲೇ ಕನ್ನಡಪ್ರಭದ ಕೆ. ಸತ್ಯನಾರಾಯಣ ಅವರ ರಾಜಕೀಯ ಅಂಕಣ ಒಂದು ವಿಶೇಷ ಅಂಕಣ. ಸುದೀರ್ಘಕಾಲದ ಪ್ರಕಟಣೆಯ ದಾಖಲೆ ಅವರ ಅಂಕಣಕ್ಕೆ ಇದೆ.

* ಸತ್ಯನಾರಾಯಣ ಅವರು ಆರ್ಥಿಕ ವಿಷಯದ ಬಗ್ಗೆಯೂ ಅಂಕಣ ಬರೆಯುತ್ತಾರೆ. ಶೈಲೇಶ ಚಂದ್ರ ಪ್ರಜಾವಾಣಿಯಲ್ಲಿ ಪೇಟೆಮಾತು ಅಂಕಣ ಬರೆಯುತ್ತಿದ್ದರು. ಈಗ ಷೇರು ಮಾರುಕಟ್ಟೆ ಕುರಿತ ಅನೇಕ ಅಂಕಣಗಳಿವೆ.

* ಟ್ಯಾಬ್ಲಾಯ್ಡ್ ಪಾಲಿಗೆ ಅಂಕಣಗಳು ಅಂದಿಗೂ ಇಂದಿಗೂ ವಿಶೇಷ ಆಕರ್ಷಣೆ. ಹಾಯ್ ಬೆಂಗಳೂರು ಪತ್ರಿಕೆಯಲ್ಲಿ ರವಿ ಬೆಳಗೆರೆ ಅಂಕಣಗಳು ಇದಕ್ಕೆ ಉದಾಹರಣೆ.

* ಕನ್ನಡದ ಖ್ಯಾತ ಸಾಹಿತಿಗಳು ಪತ್ರಿಕೆಗಳಿಗೆ ಅಂಕಣ ಬರೆದಿದ್ದಾರೆ. ಶಿವರಾಮ ಕಾರಂತರು, ಡಿವಿಜಿ, ಅನಕೃ, ರಾಜರತ್ನಂ, ನಿರಂಜನ, ವ್ಯಾಸರಾಯ ಬಲ್ಲಾಳ, ಯು.ಆರ್. ಅನಂತಮೂರ್ತಿ, ಪಿ. ಲಂಕೇಶ್, ಪೂರ್ಣಚಂದ್ರ ತೇಜಸ್ವಿ, ವೈದೇಹಿ, ಎಚ್.ಎಸ್. ವೆಂಕಟೇಶಮೂರ್ತಿ, ಜಯಂತ ಕಾಯ್ಕಿಣಿ ಮೊದಲಾದವರ ಹೆಸರುಗಳು ನೆನಪಾಗುತ್ತವೆ. ಸಾಹಿತ್ಯದ ಬಗ್ಗೆ ವಿಮರ್ಶಕರಾದ ಟಿ.ಪಿ. ಅಶೋಕ, ನರಹಳ್ಳಿ ಬಹಳ ಕಾಲ ಅಂಕಣಗಳನ್ನು ಬರೆದಿದ್ದಾರೆ. ತುಷಾರ, ಮಯೂರ ಮಾಸಪತ್ರಿಕೆಗಳ ಇಂತಹ ಅಂಕಣಗಳು ಗಮನಾರ್ಹವಾಗಿದ್ದವು.

* ಅಂದಿನ ಅಂಕಣಗಳು ಸಮಕಾಲೀನ ರಾಜಕೀಯ, ಸಾಮಾಜಿಕ, ಸಾಂಸ್ಕೃತಿಕ ಜೀವನದ ಅಮೂಲ್ಯ ದಾಖಲೆಗಳಾಗಿ ಸಾರ್ವಕಾಲಿಕ ಮೌಲ್ಯ ಪಡೆದಿವೆ. ಬೆಳಿಗ್ಗೆ ನಾನು ಎರಡು ಇಡ್ಲಿ ತಿಂದೆ, ಸಂಜೆ ಎರಡು ಬಿಯರ್ ಕುಡಿದೆ ಅಥವ ಇವರು ನನಗೆ ತಿಂಡಿಗೆ ಸಿಕ್ಕಿದ್ದರು, ಅವರು ನನ್ನ ಊಟಕ್ಕೆ ಕರೆದಿದ್ದರು ಅಥವ ನಾನು ಇದನ್ನು ಮಾಡಿದೆ, ನಾನು ಅದನ್ನು ಹೇಳಿದೆ ಅಥವ ನಾನು ಅಲ್ಲಿ ಭಾಷಣಕ್ಕೆ ಹೋದೆ, ನಾನು ಇಲ್ಲಿ ಅತಿಥಿಯಾಗಿ ಹೋದೆ ಮುಂತಾಗಿ ಅಂಕಣಗಳಲ್ಲಿ ಬರೆದು ನಾನು, ನಾನು ಮತ್ತು ನಾನು ಗಳನ್ನು ನಿರ್ಲಜ್ಜವಾಗಿ ಓದುಗರ ಮೇಲೆ ಹೇರುವ ಚಾಳಿ ಎಲ್ಲೂ ಕಾಣುವುದಿಲ್ಲ. ಅಂದಿನ ಅಂಕಣಗಳು ಪ್ರಕಟವಾಗುವ ಪತ್ರಿಕೆಯ ಇಮೇಜ್ ಬೆಳೆಸುತ್ತಿತ್ತೇ ಹೊರತು, ಪತ್ರಿಕೆಯ ಜಾಗವನ್ನು ಬಳಸಿ ಅಂಕಣಕಾರರು ತಮ್ಮ ಇಮೇಜ್ ಬೆಳೆಸಿಕೊಳ್ಳುತ್ತಿರಲಿಲ್ಲ.

* ಅಂಕಣಗಳ ಬಗ್ಗೆ ಬರೆಯುವುದು ಬಹಳವಿದೆ. ಇಲ್ಲಿ ಸ್ವಲ್ಪ ಮಾತ್ರ ಹೇಳಿದರೂ ದೀರ್ಘವಾಗಿದೆ. ಇದಕ್ಕೆ ಓದುಗರ ಕ್ಷಮೆಯಿರಲಿ.
READ MORE - ಹಿಂದೆ ಅಂಕಣಗಳು ಹೇಗಿದ್ದವು? ಆನಂದ್ ಪಾಟೀಲ್ ನೆನಪುಗಳು

[美女] 最索 Santa 張舒媛

Diposkan oleh Batas Langit | 23:51


READ MORE - [美女] 最索 Santa 張舒媛


READ MORE - [教學] 敷膜捽錫紙 索油唔怕一鑊泡


READ MORE - [可愛] 為食貓站拜討吃  cute 爆網


READ MORE - [可愛] 放貓上膊 招財進寶誓不落地


READ MORE - [消閒] 冷氣 Keep 住凍 隔塵網月月洗


READ MORE - [娛樂] 透紅女郎熊黛林 嗲人


READ MORE - [離譜] 蜘蛛浸道地柑桔檸 靚聲妹勁驚

[娛樂] 林熙蕾馬爾代夫出嫁

Diposkan oleh Batas Langit | 23:35


READ MORE - [娛樂] 林熙蕾馬爾代夫出嫁



READ MORE - [新聞] 美女 DJ 知音 畢業禮少一人


READ MORE - [活該] 大胸婦色誘司機 判監


READ MORE - [新聞] A 貨海關喪似 劫白銀 4 千萬


READ MORE - [新聞] 12 億買起雷曼苦主 花圈送中銀

[娛樂] 智霖秋怡 紅館復合

Diposkan oleh Batas Langit | 23:28


READ MORE - [娛樂] 智霖秋怡 紅館復合

Blog Archive